Professional Documents
Culture Documents
JLMS 08 AUG-ಅರಿವು
JLMS 08 AUG-ಅರಿವು
https://join.freeconferencecall.com/shivasharana
https://play.google.com/store/apps/details?id=com.freeconferencecall.fccmeetingclient
ಜಾಗತಿಕ ಅನುಭಾವ ಮಂಟಪದಲ್ಲಿ ವಚನಾನುಭಾವದ ಕಾನ್ಫರೆನ್ಸ್ ಕಾಲ್ ನಲ್ಲಿ ಭಾಗಿಯಾಗಿರುವ ಎಲ್ಲ ಶರಣರಿಗೆ
ಶರಣಾರ್ಥಿಗಳು.
ನಿರ್ವಚಿಸಲ್ಪಡುವ ವಚನಗಳು:
ಮರೆವಿನಿಂದ ಹುಟ್ಟು
2. ಅರಿಯದೆ ಜನನಿಯ ಜಠರದಲ್ಲಿ
ಬಾರದ ಭವಂಗಳ ಬರಿಸಿದೆ ತಂದೆ,
ಹುಟ್ಟಿತ್ತೆ ತಪ್ಪಾಯಿತ್ತೆ, ಎಲೆ ಲಿಂಗವೆ ?
ಮುನ್ನ ಹುಟ್ಟಿದುದಕ್ಕೆ ಕೃಪೆಯ ಮಾಡು ಲಿಂಗವೆ !
ಇನ್ನು ಹುಟ್ಟಿದಡೆ ಕೂಡಲಸಂಗಮದೇವಾ, ನಿಮ್ಮಾಣೆ.
ಶಿವಜ್ಞಾನವಲ್ಲದುದೆಲ್ಲವೂ ಅಜ್ಞಾನ:
3. ಶ್ವಾನಜ್ಞಾನ, ಗಜಜ್ಞಾನ, ಕುಕ್ಕುಟಜ್ಞಾನವೆಂಬ
ಜ್ಞಾನತ್ರಯಂಗಳೇನಾದುವು
ಕೂಡಲಸಂಗಮದೇವಾ
ನಿಮ್ಮನರಿಯದ ಜ್ಞಾನವೆಲ್ಲಾ ಅಜ್ಞಾನ.
ಅರಿಯುವುದು ಹೇಗೆ:
4. ಜ್ಞಾನದಿಂದ ನಿಮ್ಮನರಿದಿಹೆನೆಂದಡೆ:
ಅರಿವಿಂಗೆ ಬಂದಾಗಲೆ ಕುರುಹು.
ಕುರುಹಿಂಗೆ ಕೇಡುಂಟು;
ಜ್ಞಾನವೆಂಬುದೇನು ? ಮನೋಭೇದ !
ಇಂತಪ್ಪ ಜ್ಞಾನದ ಕೈಯಲ್ಲಿ,
ಅರುಹಿಸಿಕೊಂಡಡೆ ನೀ ದೇವನಲ್ಲ,
ಅರಿಯದಿದ್ದಡೆ ನಾ ಶರಣನಲ್ಲ.
ನೀ ದೇವ, ನಾ ಶರಣನೆಂತಾದೆ ಹೇಳಾ ಗುಹೇಶ್ವರಾ ?
ಮೌಧ್ಯತೆ:
5. ನಿಮ್ಮನರಿಯದ ಕಾರಣ ಕೈಯಲ್ಲಿ ಹುಲ್ಲು !
ನಿಮಗೆರಗದ ಕಾರಣ ಕೊರಳಲ್ಲಿ ನೇಣು !
ಹಿಂಡಲೇಕೋ ತೊಳೆಯಲೇಕೋ !
ಮುಳುಗಿ ಮುಳುಗಿ ಮೂಗ ಹಿಡಿಯಲೇಕೋ !
ಕೂಡಲಸಂಗನ ಶರಣರಲ್ಲಿ
ಡೋಹರ ಕಕ್ಕಯ್ಯನಾವ ತೊರೆಯಲಿ ಮಿಂದ
ಶರಣನ ಅರಿವು:
9. ತನ್ನ ತಾನರಿದೆನೆಂಬವನ ಮುನ್ನ ನುಂಗಿತ್ತು ಮಾಯೆ. ನಿನ್ನೊಳಗೆ ಅರಿವು ಭಿನ್ನವಾಗಿರುತ್ತಿರಲು ಮುನ್ನವೆ ನೀನು
ದೂರಸ್ಥ ನೋಡಾ ! ಭಿನ್ನವಿಲ್ಲದೆ ಅಜ್ಞಾನವ ಭಿನ್ನವ ಮಾಡಬಲ್ಲಡೆ ತನ್ನಲ್ಲಿ ಅರಿವು ನಿಜವಪ್ಪುದು ಗುಹೇಶ್ವರಾ
ಜಾಗತಿಕ ಅನುಭಾವ ಮಂಟಪದಲ್ಲಿ ಶನಿವಾರ ಮತ್ತು ರವಿವಾರ ಸಾಯಂಕಾಲ 5 PM ರಿಂದ 6 PM ರ ವರೆಗೆ ಜರುಗುವ
ವಚನಾನುಭಾವ ಕಾನ್ಫರೆನ್ಸ್ ಕಾಲ್ ನಲ್ಲಿ ಭಾಗವಹಿಸಲು:
https://join.freeconferencecall.com/shivasharana
https://play.google.com/store/apps/details?id=com.freeconferencecall.fccmeetingclient
ಜಾಗತಿಕ ಅನುಭಾವ ಮಂಟಪದಲ್ಲಿ ವಚನಾನುಭಾವದ ಕಾನ್ಫರೆನ್ಸ್ ಕಾಲ್ ನಲ್ಲಿ ಭಾಗಿಯಾಗಿರುವ ಎಲ್ಲ ಶರಣರಿಗೆ
ಶರಣಾರ್ಥಿಗಳು.
ಇಂದಿನ ಅನುಭಾವ *ಅರಿವು*: (1) ನಿರ್ವಿಕಾರ ನಿತ್ಯ ನಿರಂಜನ ನಿರ್ಗುಣ ಪರಿಪೂರ್ಣ ನಿರ್ವಿಕಲ್ಪ, (2) ಉಪಮೆ
ಉಪಮಿಸಲರಿಯದೆ ಉಪಮಾತೀತವೆನುತ್ತಿದ್ದಿತ್ತು, (3) ಭಾವನಾಸ್ತಿಯಾದಲ್ಲದೆ ಅರಿವು ನೆಲೆಗೊಳ್ಳದು, (4) ಅರಿವು ಆಚಾರದಲ್ಲಿ
ಸಮವೇಧಿಸಿದ ಲಿಂಗೈಕ್ಯ, (5) ಸಾವನರಿಯದ ಅರೆಮರುಳಗಳು, (6) ಜ್ಞಾತೃ ಜ್ಞಾನ ಜ್ಞೇಯವೆಂಬ ತ್ರಿವಿಧಸಾಧನ, (7) ಅರಿವು
ಸಯವಾಗಿ ದೊರೆಕೊಂಡ ಬಳಿಕ; ಗುರುವಾರು ? ಲಿಂಗವಾರು ?, (8) ಅರಿವು ಅರಿವು ಎನುತಿಪ್ಪಿರಿ, ಅರಿವು ಸಾಮಾನ್ಯವೆ? (9)
ನಿಮ್ಮಲ್ಲಿ ನೀವು ತಿಳಿದು ನೋಡಿದರೆ ಅನ್ಯವಿಲ್ಲ, (10) ನಿಮ್ಮ ಅರಿದ ಅರಿವ ಭಿನ್ನವಿಟ್ಟು ಕಂಡೆನಾದಡೆ, (11) ಕಾಯಗುಣ
ನಾಸ್ತಿಯಾದುದೆ ವಿಭೂತಿ
ನಿರ್ವಚಿಸಲ್ಪಡುವ ವಚನಗಳು:
8. ಅರಿವು ಅರಿವು ಎನುತಿಪ್ಪಿರಿ, ಅರಿವು ಸಾಮಾನ್ಯವೆ ? ಹಿಂದಣ ಹೆಜ್ಜೆಯ ನೋಡಿ ಕಂಡಲ್ಲದೆ ನಿಂದ
ಹೆಜ್ಜೆಯನರಿಯಬಾರದು. ಮುಂದಣ ಹೆಜ್ಜೆಯಳಿದಲ್ಲದೆ, ಒಂದು ಪಾದ ನೆಲೆಗೊಳ್ಳದು. ನೆಲನ ಬಿಟ್ಟು ಆಕಾಶದಲ್ಲಿ
ನಿಂದು ಮುಗಿಲೊಳಗೆ ಮಿಂಚಿದಲ್ಲದೆ ತಾನಾಗಬಾರದು. ಗುಹೇಶ್ವರನೆಂಬುದು ಬರಿದೆ ಬಹುದೆ ಹೇಳಿರೆ ? 719
10. ಅರಿವುವಿಡಿದು, ಅರಿವನರಿದು, ಅರಿವೆ ನೀವೆಂಬ ಭ್ರಾಂತು ಎನಗಿಲ್ಲವಯ್ಯಾ, ಮರಹುವಿಡಿದು, ಮರಹ ಮರೆದು,
ಮರಹು ನೀವೆಂಬ ಮರಹಿನವ ನಾನಲ್ಲವಯ್ಯಾ. ದೇಹ ಪ್ರಾಣಂಗಳ ಹಿಂಗಿ, ದೇಹವಿಡಿದು, ದೇಹ ನಿಮ್ಮದೆಂಬ
ಭ್ರಾಂತುಸೂತಕಿ ನಾನಲ್ಲವಯ್ಯಾ. ನಿಮ್ಮ ಅರಿದ ಅರಿವ ಭಿನ್ನವಿಟ್ಟು ಕಂಡೆನಾದಡೆ ನಿಮ್ಮಾಣೆ ಕಾಣಾ,
ಕೂಡಲಸಂಗಮದೇವಾ.
11. ಅರಿವು ನಾಸ್ತಿಯಾದುದೆ ಗುರು, ಕುರುಹು ನಾಸ್ತಿಯಾದುದೆ ಲಿಂಗ, ಕಾಯಗುಣ ನಾಸ್ತಿಯಾದುದೆ ವಿಭೂತಿ,
ಕರಣಗುಣನಾಸ್ತಿಯಾದುದೆ ರುದ್ರಾಕ್ಷಿ, ಮರಹು ನಾಸ್ತಿಯಾದುದೆ ಮಂತ್ರ ಇಂತೀ ಪಂಚಾಚಾರ ಪ್ರತಿಷ್ಠೆಯುಳ್ಳಾತನೆ
ಕೂಡಲಚೆನ್ನಸಂಗಯ್ಯನಲ್ಲಿ ಸದಾಚಾರಿ.